
ಹಾಸನ: ನಗರದ ಪೆನ್ಷನ್ ಮೊಹಲ್ಲಾದಲ್ಲಿರುವ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಹೋಪ್ ಫಾರ್ ಹ್ಯೂಮನಿಟಿ ವೆಲ್ಫೇರ್ ಟ್ರಸ್ಟ್ ಮತ್ತು ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚನ್ನರಾಯಪಟ್ಟಣ ಇವರ ಸಹಯೋಗದೊಂದಿಗೆ ಭಾನುವಾರ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಇದರಲ್ಲಿ ನೂರಾರು ಜನರು ಇದರ ಪ್ರಯೋಜನ ಪಡೆದುಕೊಂಡರು.
ಇದೆ ವೇಳೆ ನಗರಸಭೆ ಸದಸ್ಯ ಅಮೀರ್ ಜಾನ್ ಮಾತನಾಡಿ, ಮನುಷ್ಯನಿಗೆ ಬಿಪಿ, ಶುಗರ್ ಇತರೆ ಏನಿದೆ ಎಂದು ತಿಳಿಯಬೇಕಾದರೇ ವೈದ್ಯರ ಬಳಿ ಪರೀಕ್ಷೆ ಮಾಡಿಸಿಕೊಂಡರೇ ಮಾತ್ರ ಸರಿಯಾಗಿ ತಿಳಿಯುತ್ತದೆ. ವರ್ಷದಲ್ಲಿ ಒಂದು ಇಲ್ಲವೇ ಎರಡು ಬಾರಿ ದೇಹ ಪರೀಕ್ಷೆ ಮಾಡಿಸಿಕೊಳ್ಳುವುದು ಸೂಕ್ತ. ಆರೋಗ್ಯ ಇದ್ದರೇ ಸಮಾಜದಲ್ಲಿ ಏನಾದರು ಸಾಧಿಸಬಹುದು ಎಂದರು.
ಸಮಾಜ ಸೇವಕ ಎಸ್.ಎಸ್. ಪಾಷಾ ಮಾತನಾಡಿ, ಒಂದು ಹಳೆ ಹಾಸನ ಎಂದರೇ ಬಸ್ ನಿಲ್ದಾಣದಿಂದ ಒಳಗೆ, ಎಪಿಎಂಸಿಯಿAದ ಇಲ್ಲಿಗೆ ಬಹುತೇಕರು ಹಳೆ ಹಾಸನದವರು. ಈ ಭಾಗ ನೆಗ್ಲೆಟ್ ಗೆ ಒಳಗಾಗಿದೆ. ಈ ಭಾಗಕ್ಕೆ ಒಂದು ಸಿಟಿ ಬಸ್ ಸೌಕರ್ಯವಿಲ್ಲ. ಗ್ರಂಥಾಲಯವಿಲ್ಲ. ಸರಿಯಾದ ಆಸ್ಪತ್ರೆ ಕೂಡ ಇಲ್ಲ. ಇದ್ದರೂ ನಾಮಕವಸ್ತೆ ಮಾತ್ರ ಇದೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ಈಗಾಗಲೇ ತಿಳಿಸಲಾಗಿದೆ ಎಂದರು. ನಾನು ಕೂಡ ಇಲ್ಲೆ ಹುಟ್ಟಿ ಬೆಳೆದವರು, ಇಲ್ಲಿನ ಕಷ್ಟಗಳನ್ನು ಕಂಡಿದ್ದೇವೆ. ಇಲ್ಲಿನ ಜನರಿಗೆ ಸೌಕರ್ಯದ ಕೊರತೆ ಎದ್ದು ಕಾಣುತ್ತಿದೆ ಎಂದು ಬೇಸರವ್ಯಕ್ತಪಡಿಸಿದರು. ಖಾಯಿಲೆ ಬಂದ ಮೇಲೆ ಔಷಧಿ ತೆಗೆದುಕೊಳ್ಳುತ್ತೇವೆ. ಆದರೇ ಖಾಯಿಲೆ ಬರುವುದಕ್ಕೆ ಮೊದಲೇ ಎಚ್ಚೆತ್ತುಕೊಳ್ಳುವುದು ಸೂಕ್ತ. ಬೆಳಗಿನ ಸಮಯ ವಾಕ್ ಮಾಡಬೇಕು. ಯಾವಾಗಲೂ ವಾಹನದಲ್ಲೆ ನಾವು ಹೋಗುತಿದ್ದರೇ ನಾನಾ ಖಾಯಿಲೆಗಳು ಉದ್ಭವಿಸುತ್ತದೆ. ನಮ್ಮ ಜೀವನ ಶೈಲಿಯಲ್ಲಿ ಸಲ್ಪ ಬದಲಾವಣೆ ಮಾಡಿಕೊಂಡು ನಡೆಯುವ ಪ್ರವೃತ್ತಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ತಮ್ಮದಾಗಿಸಿಕೊಳ್ಳುವಂತೆ ಸಲಹೆ ನೀಡಿದರು.
ಡಾಕ್ಟರ್ ನಾಯೀಮ್ ಸಿದ್ದಿಕಿ ಮಾತನಾಡಿ, ಇಂತಹ ಉಚಿತ ಆರೋಗ್ಯ ಶಿಬಿರಗಳು ಬಡವರಿಗೆ ಅಗತ್ಯವಿದೆ. ಒಮದು ಸಾಮಾನ್ಯ ಚಿಕಿತ್ಸೆಗಾಗಿ ದೂರದ ಸ್ಥಳಗಳಿಗೆ ದುಂದು ವೆಚ್ಚ ಮಾಡಿಕೊಂಡು ಹೋಗಬೇಕಾಗಿದೆ. ಈ ಶಿಬಿರಕ್ಕೆ ನುರಿತ ವೈದ್ಯರು ಇದ್ದು, ಇಲ್ಲಿನ ಸುತ್ತಮುತ್ತಲಿನ ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.
ಬಾಳೆಹಣ್ಣು ವರ್ತಕರ ಸಂಘದ ಅಧ್ಯಕ್ಷ ಸಮೀರ್ ಅಹಮದ್ ಪ್ರಾಸ್ತಾವಿಕ ನುಡಿಯಲ್ಲಿ ಮಾತನಾಡಿ, ರಕ್ತದ ಅವಶ್ಯಕತೆ ಇದ್ದಾಗ ಯಾವ ಜಾತಿ ಇರುವುದಿಲ್ಲ. ಒಟ್ಟಾರೆ ರಕ್ತದ ಅವಶ್ಯಕತೆ ಇರುತ್ತದೆ. ರಕ್ತದಾನ ಮಾಡುವುದು ಒಳ್ಳೆಯ ಉದ್ದೇಶ. ಇದರಲ್ಲಿ ಯುಆವ ಸಂಬAಧ ಇರುವುದಿಲ್ಲ. ವರ್ಷಕ್ಕೆ ಮೂರು ಬಾರಿ ರಕ್ತದಾನ ಮಾಡಿದರೇ ನಮ್ಮ ದೇಹಕ್ಕೆ ಹೊಸ ರಕ್ತ ಉತ್ಪತ್ತಿಯಾಗಿ ಆರೋಗ್ಯ ಸುಧಾರಿಸುತ್ತದೆ. ದೈಹಿಕವಾಗಿ ಸದೃಢರಾಗಿರುತ್ತೇವೆ ಎಂದರು. ಈ ಉದ್ದೇಶದಲ್ಲಿ ಇಂತಹ ಆರೋಗ್ಯ ಶಿಬಿರ ಹಮ್ಮಿಕೊಂಡಿರುವುದಾಗಿ ಹೇಳಿದರು
.
ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರದಲ್ಲಿ ನೂರಾರು ಜನರು ಪಾಲ್ಗೊಂಡು ಇದರ ಸದುಪಯೋಗ ಪಡೆದುಕೊಂಡರು. ಈ ಕಾರ್ಯಕ್ರಮದಲ್ಲಿ ಮೂಳೆ ತಜ್ಞರು ನರರೋಗ ತಜ್ಞರು ಸ್ತಿçÃರೋಗ ತಜ್ಞರು, ನೇತ್ರ ತಜ್ಞರು, ಹೃದ್ರೋಗ ತಜ್ಞರು ಹಾಗೂ ಉಚಿತ ಕನ್ನಡಕ ಸಹಿತವಾಗಿ ಈ ಮೇಲ್ಕಂಡ ಖಾಯಿಲೆಗಳ ತಪಾಸಣೆ ಶಿಬಿರವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಹೋಪ್ ಫಾರ್ ಹ್ಯೂಮನಿಟಿ ಅಧ್ಯಕ್ಷರಾದಂತಹ ಮುದಸಿರ್, ಹಫೀಜ್ ಹಿದಾಯ್ತುಲ್ಲ ಖಾನ್, ಇಂಡಿಯಾನಾ ಆಸ್ಪತ್ರೆಯ ಡಾಕ್ಟರ್ ಆಫ್ರಿಕಾ ತಾಜ್, ಇಂಡಿಯನ್ ಆಸ್ಪತ್ರೆ, ಹೆಚ್.ಜಿ. ಭರತ್ ಕುಮಾರ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚನ್ನರಾಯಪಟ್ಟಣ ಚೇರ್ಮನ್, ಜಬಿ ಉಲ್ಲಬೇಗ್, ಕಾರ್ಯದರ್ಶಿ ಡಾಕ್ಟರ್ ಕೃತಿ, ನಿ ಡಾಕ್ಟರ್ ಮಹೇಂದ್ರರವರು, ಡಾಕ್ಟರ್ ಶಶಂಕ್, ಸಪ್ತಗಿರಿ ಆಸ್ಪತ್ರೆ ಬೆಂಗಳೂರು, ಪವನ್ ರಾಜ್ ರವರು ರಾಕೇಶ್ ನೇತ್ರಾಲಯ ಇತರರು ಉಪಸ್ಥಿತರಿದ್ದರು.