ಅಂಬೇಡ್ಕರ್ ೬೮ನೇ ಪರಿನಿರ್ವಾಣ ದಿನದಲ್ಲಿ ಜಿಪಂ ಸಿಇಒ ಬಿ.ಆರ್. ಪೂರ್ಣಿಮಾ ಹಾಸನ : ಸಂವಿಧಾನದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ಕೆಲಸ ಮಾಡಿದ್ದು, ಇನ್ನು ಮಹಿಳೆಯರು ಕೂಡ ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಸ್ಥಾನಮಾನಗಳಿಸಬಹುದು ಎಂಬುದಕ್ಕೆ ನಾವೇ ಉದಾಹರಣೆಯಾಗಿದ್ದು, ನಮ್ಮ ಸ್ಥಾನಮಾನಗಳು ಕೂಡ ಸಂವಿಧಾನದ ಕೊಡುಗೆಯ ಫಲವಾಗಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಬಿ.ಆರ್ ಪೂರ್ಣಿಮಾ ತಿಳಿಸಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ದೂದ್ ಪೀರ್, ನಾಗರಾಜು ಹೆತ್ತೂರ್, ಪ್ರಕಾಶ್, ಕೃಷ್ಣದಾಸ್, ಹೆಚ್.ಕೆ. ಸಂದೇಶ್ ಹಾಗೂ ದಲಿತ ಮತ್ತು ಬೌದ್ಧ ಧರ್ಮದ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.