ಹಾಸನ: ಇಲ್ಲಿಗೆ ಐಐಟಿ ತರಲು ದೇವೇಗೌಡರು ಕಳೆದ ಇಪ್ಪತ್ತು ವರ್ಷದಿಂದ ಫೈಟ್ ಮಾಡ್ತರ್ವೆ ಅವರ ಆಸೆ ಭಗವಂತ ಈಡೇರಿಸುತ್ತಾನೆ. ಸದ್ಯದಲ್ಲೇ ಹಾಸನದ ವಿಮಾನ ನಿಲ್ದಾಣದ ಕಾಮಗಾರಿ ವೇಗ ದೊಡ್ಡಮಟ್ಟದಲ್ಲಿ ಸಾಗಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.
ನಗರದ ಹೊರವಲಯದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಜೆಡಿಎಸ್ ಬೃಹತ್ ಸಂಘಟನಾ ಸಮಾವೇಶ ಮಾಡುವ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿಕೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಗೆ ನಾನೇ ಖುದ್ದು ಜವಾಬ್ದಾರಿ ತೆಗೆದುಕೊಳ್ಳಬೇಕಾಗದ್ದು, ಪಕ್ಷದ ಸಂಘಟನೆ ಅವಶ್ಯಕತೆ ಇದೆ. ಸಂಘಟನೆಯ ಜವಾಬ್ದಾರಿಯನ್ನು ರಾಷ್ಟಿçÃಯ ಅಧ್ಯಕ್ಷರೇ ವಹಿಸಿಕೊಳ್ಳುತ್ತಿದ್ದಾರೆ.
ನಾನು ಕೇಂದ್ರ ಮಂತ್ರಿಯಾಗಿ ಬಿಡುವಿಲ್ಲದ ಕಾರ್ಯಕ್ರಮಗಳಿಂದ ಅವರೇ ಖುದ್ದು ಪಕ್ಷದ ಶಾಸಕರು, ಮಾಜಿ ಶಾಸಕರು, ಕಾರ್ಯಕರ್ತರು ಜೊತೆಗೂಡಿ ಸಂಘಟನೆಗೆ ತೀರ್ಮಾನ ಮಾಡಿದ್ದಾರೆ ಎಂದರು. ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿಸುತ್ತೇನೆ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ವಿಚಾರವಾಗಿ ಮಾತನಾಡಿ, ಅವರು ಯಾವ ಅಭಿವೃದ್ಧಿ ಮಾಡಿದ್ದಾರೆ? ಅಭಿವೃದ್ಧಿ ಮಾಡಿರುವವನು ಇಲ್ಲಿದ್ದೀನಿ. ನಾನು ರಾಮನಗರಕ್ಕೆ ಹೋಗುವ ಮುಂಚೆ ಹೇಗಿತ್ತು? ಕನಕಪುರ ಹೇಗಿತ್ತು? ಎಸ್.ಎಂ. ಕೃಷ್ಣ ಅವರು ನಂಜುAಡಪ್ಪ ವರದಿ ತರಿಸಿಕೊಂಡಾಗ 174 ಸ್ಥಾನ ಕೊನೆ ಹಂತದಲ್ಲಿತ್ತು. ಇವತ್ತು ಯಾವ ಮಟ್ಟಕ್ಕೆ ಬೆಳೆದಿದೆ, ಕಾರಣ ಯಾರು ಎಂದು ಪ್ರಶ್ನಿಸಿ ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇಲ್ಲ. ಸಾಕ್ಷಿ ಗುಡ್ಡೆ ಕೇಳ್ತಾರೆ, ನಾನಂತು ದೊಡ್ಡಮಟ್ಟದ ಸಾಕ್ಷಿ ಗುಡ್ಡೆ ಇಟ್ಟುಕೊಂಡಿಲ್ಲ. ಕಷ್ಟಪಟ್ಟು 45 ಎಕರೆ ಖರೀದಿ ಮಾಡಿದ್ದೆ ಅದನ್ನು ಬಿಡ್ತಿಲ್ಲ. ಅದನ್ನು ಲಪಟಾಯಿಸಲು ಮುಂದಾಗಿದ್ದಾರೆ. ನೆನ್ನೆ ನನಗೆ ನೋಟೀಸ್ ಕೊಡದೆ ದಾಳಿ ಮಾಡಲು ಬಂದಿದ್ದರು. ನನ್ನ ಭೂಮಿ ಸರ್ವೆ ಮಾಡುವುದಾದರೆ ನೋಟೀಸ್ ಕೊಡಿ. ಇಂಟರ್ನ್ಯಾಷನಲ್ ಸರ್ವೆಯರ್ ಕರ್ಕಂಡು ಬನ್ನಿ, ಇಲ್ಲಿಯವರ ಕೈಯಲ್ಲಿ ಆಗಲ್ಲ. ಸರ್ವೆ ಮಾಡಲು ಯಾವುದಾದರೂ ಹೊರ ದೇಶದಿಂದ ಕರೆದುಕೊಂಡು ಬನ್ನಿ ತಯಾರಾಗಿದ್ದೇನೆ ಎಂದು ಸವಾಲು ಹಾಕಿದರು.
ಹಾಸನ ವಿಮಾನ ನಿಲ್ದಾಣದ ಬಗ್ಗೆ ಎಲ್ಲಾ ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ. ಅಧಿಕಾರಿಗಳು ಸಹಕಾರ ಕೊಟ್ಟು ಕೆಲಸ ಮಾಡುತ್ತಿದ್ದಾರೆ. ಸದ್ಯದಲ್ಲೇ ವಿಮಾನ ನಿಲ್ದಾಣದ ಕಾಮಗಾರಿ ವೇಗ ದೊಡ್ಡಮಟ್ಟದಲ್ಲಿ ನಡೆಯುತ್ತದೆ ಎಂದು ಭರವಸೆ ನೀಡಿದ