
ಹಾಸನ: ಡಿ.ಪಿ ಚಂದ್ರಶೇಖರ್ ಅಭಿಮಾನಿಗಳ ಬಳಗದ ವತಿಯಿಂದ ಮಾರ್ಚ್ 17 ರಂದು ದಿವಂಗತ ಡಾ. ಪುನೀತ್ ರಾಜ್ ಕುಮಾರ್ ಅವರ 50ನೇ ವರ್ಷದ ಹುಟ್ಟುಹಬ್ಬದ ನಾಗವಾಗಿ ಪುನೀತ್ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವಿಮಾನಿ ಬಳಗದ ಜಿಲ್ಲಾಧ್ಯಕ್ಷ ಪ್ರದೀಪ್ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ತಾಲೂಕಿನ ಸಾಲಗಾಮೆ ಸಂತೆ ಮೈದಾನದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಅಂಗವಾಗಿ ನೇತ್ರದಾನ, ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಆರೋಗ್ಯ ತಪಾಸಣೆಯಲ್ಲಿ ನುರಿತ ವೈದ್ಯಕೀಯ ಆಸ್ಪತ್ರೆಗಳು ಭಾಗವಹಿಸಲಿವೆ ಎಂದು ಮಾಹಿತಿ ನೀಡಿದರು.
ಇದಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ, ಆದೆ ದಿನ ಸಂಜೆ ಖ್ಯಾತ ನಿರೂಪಕ ಮತ್ತು ನಟರಾದ ಶ್ಯಾಂ ಅವರು ಅರ್ಪಿಸುವ ಮಿಲನ್ ಮ್ಯೂಸಿಕಲ್ ಸೆಲೆಬ್ರೇಷನ್ ಸ್ಟಾರ್ ನೈಟ್ ಇವರಿಂದ ಸಂಗೀತಾ ಮತ್ತು ಮನೋರಂಜನೆ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಶ್ರೇಯಸ್ ಪಟೇಲ್ ಭಾಗವಹಿಸಲಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಸಮಾಜ ಸೇವಕ ಡಿಪಿ ಚಂದ್ರಶೇಖರ್ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕು ಎಂದು ಮನವಿ ಮಾಡಿದರು. ಈ ನಾಡಿಗೆ ಅಪಾರ ಜನ ಸೇವೆ ಮೂಲಕವೇ ಹೆಸರಿಗಿರುವ ಪುನೀತ್ ರಾಜ್ ಕುಮಾರ್ ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಎಲೆಮರೆ ಕಾಯಿಯಂತೆ ಅಪಾರ ಸೇವಗಳನ್ನು ಮಾಡಿ ಇಂದಿಗೂ ಜನರ ಮನಸ್ಸಿನಲ್ಲಿ ಜೀವಂತವಾಗಿ ಉಳಿದಿರುವ ಪುನೀತ್ ರಾಜ್ ಕುಮಾರ್ ಎಂದಿಗೂ ಜೀವಂತ. ಅವರ ನೆನಪಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಡಿ.ಪಿ. ಚಂದ್ರಶೇಖರ್ ಅಭಿಮಾನಿ ಬಳಗದ ಸಂತೋಷ್, ದರ್ಶನ್, ದಿನೇಶ, ಚಿರತ್, ಅಭಿಲಾಶ್.ಇತರರು ಇದ್ದರು